ರಾಜ್ಯ

ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್:ಆರ್.ಅಶೋಕ ಆಕ್ರೋಶ

ಒಳ ಮೀಸಲಾತಿ ಜಾರಿಗೆ ಬಿಜೆಪಿ ಪ್ರಯತ್ನ ಮಾಡಿತ್ತು, ಪ್ರಧಾನಿ ಮೋದಿ ಕೂಡ ಅನುಮೋದನೆ ನೀಡಿದ್ದರು

ಕಾಂಗ್ರೆಸ್ ನ ಕ್ಲೀನ್ ಚಿಟ್ ಯಾರಿಗೂ ಬೇಕಿಲ್ಲ

ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ. ಎಸ್ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದರು.

ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್ ಚಿಟ್ ಯಾರಿಗೂ ಬೇಕಿಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago