ರಾಜ್ಯ

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರ. ಇದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ವರಾಹಿ ಯೋಜನೆ : ಯಾರಿಗೂ ಅನ್ಯಾಯ ಆಗಲು ಬಿಡಲ್ಲ
ವರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

5 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

5 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

6 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

6 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

6 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

6 hours ago