ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖರ್ಗೆ ಅವರ ಜೊತೆಗೆ ಎರಡು ಗಂಟೆಗಳ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಇಂದಿನ ಬ್ರೇಕ್ ಪಾಸ್ಟ್ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ ಈವರೆಗೂ ನಡೆದ ಬೆಳವಣಿಗೆ ಬಗ್ಗೆ ಖರ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿದರು. ಮುಖ್ಯವಾಗಿ ಸಿಎಂ ಬದಲಾವಣೆ ಬಗ್ಗೆಯೂ ಚರ್ಚೆಗೆ ಆಗಿದ್ದು, ಸಾಧಕ-ಬಾಧಕಗಳ ಬಗ್ಗೆ ವಿಮರ್ಶೆ ನಡೆದಿದೆ ಎನ್ನಲಾಗಿದೆ. ನಾಳೆ ಸಂಜೆ ಐದು ಗಂಟೆಗೆ ಕಾಂಗ್ರೆಸ್ ವರಿಷ್ಠೆ ಸೋನಿಯ ಗಾಂಧಿ ಜೊತೆಗೆ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರುವ ನಿರ್ಧಾರ ಮಾಡಲಾಗಿದೆ. ಹೀಗಾಗಿ, ನಾಳೆ ಸೋನಿಯ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆ ನಿರ್ಣಾಯಕವಾಗಿದ್ದು, ಮುಖ್ಯಮಂತ್ರಿ ಹುದ್ದೆಯ ಭವಿಷ್ಯ ನಿರ್ಣಯಿಸಲಿದೆ.
ಇದನ್ನೂ ಓದಿ:-ಅಧಿವೇಶನ | ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಯಾಗಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ
ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ಪರಸ್ಪರ ಮಾತುಕತೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ಸೂಚನೆ ನೀಡಿತ್ತು. ಅದರಂತೆ ಸಿಎಂ ಮತ್ತು ಡಿಸಿಎಂ ಇಂದು ಬೆಳಗ್ಗೆ ಉಪಾಹಾರ ಸಭೆ ನಡೆಸಿದರು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಇಬ್ಬರೂ ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…