ಬೆಂಗಳೂರು: ಪೆನ್ಡ್ರೈವ್ ಪ್ರಕರಣ ಹಾಗೂ ಎಚ್ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಎಸ್ಐಟಿಗೆ ದೂರು ದಾಖಲಿಸಿದೆ.
ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹೀಗಿರುವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಹಾಗೂ ಸಂತ್ರಸ್ತರ ಸ್ಥಳಗಳನ್ನು ಬಹಿರಂಗ ಪಡಿಸುತ್ತಿದ್ದಾರೆ. ಹೀಗಾಗಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಹೆಚ್ಚಿನ ಮಾಹಿತಿಗಳಿದ್ದು, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್ಡಿ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವಾರು ಮಹಿಳೆಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…
• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…