ಬೆಂಗಳೂರು: ಪೆನ್ಡ್ರೈವ್ ಪ್ರಕರಣ ಹಾಗೂ ಎಚ್ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಎಸ್ಐಟಿಗೆ ದೂರು ದಾಖಲಿಸಿದೆ.
ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹೀಗಿರುವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಹಾಗೂ ಸಂತ್ರಸ್ತರ ಸ್ಥಳಗಳನ್ನು ಬಹಿರಂಗ ಪಡಿಸುತ್ತಿದ್ದಾರೆ. ಹೀಗಾಗಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಎಚ್ಡಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಹೆಚ್ಚಿನ ಮಾಹಿತಿಗಳಿದ್ದು, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್ಡಿ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವಾರು ಮಹಿಳೆಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…