ರಾಜ್ಯ

ಜೆಡಿಎಸ್‌ ಭದ್ರಕೋಟೆಯಲ್ಲಿ ಸ್ವಾಭಿಮಾನಿ ಜನಕಲ್ಯಾಣ ಸಮಾವೇಶ ಶುರು

ಹಾಸನ:  ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ  ಸಮಾವೇಶದ ಮೂಲಕ ಕಾಂಗ್ರೆಸ್‌ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.

ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್‌, ಜೆಡಿಎಸ್‌- ಬಿಜೆಪಿಗೆ ಠಕ್ಕರ್‌ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ ಪಕ್ಷದ ಮೈಲೇಜ್‌ ಹೆಚ್ಚಿಸುವಲ್ಲಿ ಪಾತ್ರ ವಹಿಸಲಿದೆ.

6 ಜಿಲ್ಲೆಗಳನ್ನೊಳಗೊಂಡ ದೊಡ್ಡ ಸಮಾವೇಶ ಇದಾಗಿದೆ. ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭೆ ಕ್ಷೇತ್ರಗಳಿಂದ 3 ಲಕ್ಷಕ್ಕೂ ಅಧಿಕ ಜನ ಈ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಸುಮಾರು 1000 ಕ್ಕಿಂತಲೂ ಹೆಚ್ಚು ಬಸ್‌ಗಳು ಮೈಸೂರು ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಐವತ್ತು ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ತೆರಳಿದ್ದಾರೆ.

ದಿನ ನಿತ್ಯವು ಬಿಜೆಪಿ- ಜೆಡಿಎಸ್‌, ಕಾಂಗ್ರೆಸ್‌ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವ ಮುಖಾಂತರ ED, CBI, ಲೋಕಾಯುಕ್ತ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುತ್ತಿವೆ.

ಇದರಿಂದ ಜನಸಾಮಾನ್ಯರು ಗೊಂದಲಕ್ಕಿಡಾಗುತ್ತಿದ್ದಾರೆ. ಆದ ಕಾರಣ ಈ ಸಮಾವೇಶದ ಮೂಲಕ ದೊಡ್ಡ ಮಟ್ಟದ ಸಂದೇಶ ನೀಡಲು ಕಾಂಗ್ರೆಸ್‌ ಪಕ್ಷ ಸಿದ್ದವಾಗಿದೆ.

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ಗಳ ಚುನಾವಣೆ ಬರುತ್ತಿರುವುದರಿಂದ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

andolana

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

35 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

1 hour ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

2 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago