ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ ಪಕ್ಷದ ಮೈಲೇಜ್ ಹೆಚ್ಚಿಸುವಲ್ಲಿ ಪಾತ್ರ ವಹಿಸಲಿದೆ.
6 ಜಿಲ್ಲೆಗಳನ್ನೊಳಗೊಂಡ ದೊಡ್ಡ ಸಮಾವೇಶ ಇದಾಗಿದೆ. ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭೆ ಕ್ಷೇತ್ರಗಳಿಂದ 3 ಲಕ್ಷಕ್ಕೂ ಅಧಿಕ ಜನ ಈ ಸಮಾವೇಶದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಸುಮಾರು 1000 ಕ್ಕಿಂತಲೂ ಹೆಚ್ಚು ಬಸ್ಗಳು ಮೈಸೂರು ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಐವತ್ತು ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ತೆರಳಿದ್ದಾರೆ.
ದಿನ ನಿತ್ಯವು ಬಿಜೆಪಿ- ಜೆಡಿಎಸ್, ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವ ಮುಖಾಂತರ ED, CBI, ಲೋಕಾಯುಕ್ತ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುತ್ತಿವೆ.
ಇದರಿಂದ ಜನಸಾಮಾನ್ಯರು ಗೊಂದಲಕ್ಕಿಡಾಗುತ್ತಿದ್ದಾರೆ. ಆದ ಕಾರಣ ಈ ಸಮಾವೇಶದ ಮೂಲಕ ದೊಡ್ಡ ಮಟ್ಟದ ಸಂದೇಶ ನೀಡಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ.
ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ಗಳ ಚುನಾವಣೆ ಬರುತ್ತಿರುವುದರಿಂದ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…