ರಾಜ್ಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌ : ಆರ್.ಅಶೋಕ ಆಕ್ರೋಶ

ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್‌ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್‌, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ಎಂದರು.

ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್‌ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದರು.

ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದರು.

ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್‌ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ನಾಲ್ವಡಿ ಕೊಡುಗೆ ಸ್ಮರಿಸಬೇಕು
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್‌ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ. ಸೋಪ್‌ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಯತೀಂದ್ರ ಸಿದ್ದರಾಮಯ್ಯ ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದರು.

ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತುಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದರು.

136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

45 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago