ರಾಜ್ಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌ : ಆರ್.ಅಶೋಕ ಆಕ್ರೋಶ

ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್‌ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್‌, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ಎಂದರು.

ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್‌ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದರು.

ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದರು.

ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್‌ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ನಾಲ್ವಡಿ ಕೊಡುಗೆ ಸ್ಮರಿಸಬೇಕು
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್‌ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ. ಸೋಪ್‌ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಯತೀಂದ್ರ ಸಿದ್ದರಾಮಯ್ಯ ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದರು.

ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತುಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದರು.

136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

4 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

5 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

5 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

11 hours ago