ರಾಜ್ಯ

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು.

ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಅವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷವಾಗಲಿ, ನಾನಾಗಲಿ, ಎಲ್ಲರೂ ರೈತರ ಪರ ಇದ್ದೇವೆ ಎಂದರು.

ಇದನ್ನೂ ಓದಿ: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಮ್ಮದು ಜಾತ್ಯತೀತ ಸರ್ಕಾರ
ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು‌ ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago