ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್ಸಿ ಚುನಾವಣೆ ರಂಗೇರಿದೆ. ಇದೇ ಜೂನ್.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ.
ರಾಜ್ಯ ವಿಧಾನ ಪರಿಷತ್ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನೇಮಿಸಿದೆ. ಆದರೆ ಇದನ್ನು ಖಂಡಿಸಿ ಬಂಡಾಯವೆದ್ದಿರುವ ಕೆಲವು ಆಕಾಂಕ್ಷಿಗಳು ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಸರ್ಕಾರದ ಆಜ್ಞೆ ಮೀರಿ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ. ಬಂಡಾಯ ಅಭ್ಯರ್ಥಿಗಳಿಗೆ ಉಚ್ಛಾಟನೆಯ ಬಿಸಿ ತೋರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿದ ಸೂಚನೆ ಮೇರೆಗೆ ಐವರು ಅಭ್ಯರ್ಥಿಗಳು ಉಚ್ಛಾಟಿಸಿ ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡ ಬಂಡಾಯ ಅಭ್ಯರ್ಥಿಗಳು
ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್.ಪಿ ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್ ಲಾರನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…