ರಾಜ್ಯ

ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಐವರನ್ನು ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಿದ ಕಾಂಗ್ರೆಸ್‌

ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್‌ಸಿ ಚುನಾವಣೆ ರಂಗೇರಿದೆ. ಇದೇ ಜೂನ್‌.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ.

ರಾಜ್ಯ ವಿಧಾನ ಪರಿಷತ್‌ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್‌ ಪಕ್ಷ ಎಲ್ಲಾ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನೇಮಿಸಿದೆ. ಆದರೆ ಇದನ್ನು ಖಂಡಿಸಿ ಬಂಡಾಯವೆದ್ದಿರುವ ಕೆಲವು ಆಕಾಂಕ್ಷಿಗಳು ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಸರ್ಕಾರದ ಆಜ್ಞೆ ಮೀರಿ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಬಿಗ್‌ ಶಾಕ್‌ ನೀಡಿದೆ. ಬಂಡಾಯ ಅಭ್ಯರ್ಥಿಗಳಿಗೆ ಉಚ್ಛಾಟನೆಯ ಬಿಸಿ ತೋರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನೀಡಿದ ಸೂಚನೆ ಮೇರೆಗೆ ಐವರು ಅಭ್ಯರ್ಥಿಗಳು ಉಚ್ಛಾಟಿಸಿ ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ಚಂದ್ರಶೇಖರ್‌ ಆದೇಶ ಹೊರಡಿಸಿದ್ದಾರೆ.

ಉಚ್ಛಾಟನೆಗೊಂಡ ಬಂಡಾಯ ಅಭ್ಯರ್ಥಿಗಳು

ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್‌.ಪಿ ದಿನೇಶ್‌, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್‌ ಲಾರನ್ಸ್‌, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಆರ್‌ ನಂಜೇಶ್‌, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಲೋಕೇಶ್‌ ತಾಳಿಕಟ್ಟೆ ಮತ್ತು ವಿನೋದ್‌ ರಾಜ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago