ಬೆಂಗಳೂರು: ಲೋಕಸಭಾ ಚುನಾವಣೆ ಕಾವೇರುತ್ತಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಎಂಎಲ್ಸಿ ಚುನಾವಣೆ ರಂಗೇರಿದೆ. ಇದೇ ಜೂನ್.3 ರಂದು 6 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಂತ್ರಗಾರಿಕೆ ಎಣೆಯುತ್ತಿವೆ.
ರಾಜ್ಯ ವಿಧಾನ ಪರಿಷತ್ಗೆ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನೇಮಿಸಿದೆ. ಆದರೆ ಇದನ್ನು ಖಂಡಿಸಿ ಬಂಡಾಯವೆದ್ದಿರುವ ಕೆಲವು ಆಕಾಂಕ್ಷಿಗಳು ಸ್ವತಂತ್ರವಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಸರ್ಕಾರದ ಆಜ್ಞೆ ಮೀರಿ ಬಂಡಾಯ ಎದ್ದಿರುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ. ಬಂಡಾಯ ಅಭ್ಯರ್ಥಿಗಳಿಗೆ ಉಚ್ಛಾಟನೆಯ ಬಿಸಿ ತೋರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೀಡಿದ ಸೂಚನೆ ಮೇರೆಗೆ ಐವರು ಅಭ್ಯರ್ಥಿಗಳು ಉಚ್ಛಾಟಿಸಿ ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡ ಬಂಡಾಯ ಅಭ್ಯರ್ಥಿಗಳು
ನೈಋತ್ಯ ಪದವೀಧರ ಕ್ಷೇತ್ರದಿಂದ ಎಸ್.ಪಿ ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಫರ್ಡಿನಾಂಡ್ ಲಾರನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಬಿ.ಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದೆ.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…