ರಾಜ್ಯ

ಪ್ರಜ್ವಲ್‌ ಕಾಮಕಾಂಡ ಮೊದಲೇ ಗೊತ್ತಿತ್ತು ಎಂದ ಸಿಟಿ ರವಿ: ಆತನ ಸಾಧನೇ ಮೆಚ್ಚಿದರೇ ಎಂದು ಕಾಲೆಳೆದ ಕಾಂಗ್ರೆಸ್‌!

ಬೆಂಗಳೂರು: ಪ್ರಜ್ವಲ್ ರೇವಣ್ಣರ ಅಮಾನವೀಯ ಕೃತ್ಯ ಬಿಜೆಪಿಯವರಿಗೆ ಮೊದಲೇ ತಿಳಿದಿತ್ತಂತೆ, ತಿಳಿದೂ ತಿಳಿದೂ ಆತನ ಪರ ಪ್ರಚಾರ ಮಾಡಿದ್ದೇಕೆ? ಆತನನ್ನು ಬೆಂಬಲಿಸಿದ್ದೇಕೆ? ಎಂದು ರಾಜ್ಯ ಕಾಂಗ್ರೆಸ್‌ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಏ.26 ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಇದಕ್ಕೆ ಎರಡು ದಿನಗಳ ಹಿಂದೆ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸಾವಿರಕ್ಕು ಹೆಚ್ಚು ಲೈಂಗಿಕ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಇದನ್ನು ಖಂಡಿಸಿದ್ದ ನೆಟ್ಟಿಗರು ಟೀಕಾಸ್ತ್ರ ನಡೆಸಿದ್ದರು.

ಇನ್ನು ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿತ್ತು. ಮತ್ತು ಈ ಪ್ರಕರಣ ಕಾವು ಪಡೆದುಕೊಳ್ಳುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಿ ಹೋಗಿದ್ದಾರೆ.

ಇನ್ನು ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಜೆಪಿ ಮುಖಂಡ ಸಿಟಿ ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಇದು ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಜ್ವಲ್‌ ರೇವಣ್ಣ ರೇವಣ್ಣ ವೀಡಿಯೋ ಪ್ರಕರಣ ಚುನಾವಣೆಗೆ ಎರಡು ದಿನಗಳ ಮುಂಚೆಯೆ ಗೊತ್ತಿತ್ತು. ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರಜ್ವಲ್‌ಗೆ ಟಿಕೆಟ್‌ ನೀಡದಿರುವಂತೆ ಪತ್ರ ಬರೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮತ್ತು ಟಿಕೆಟ್‌ ನೀಡಿರುವುದು ನಾವಲ್ಲ, ಜೆಡಿಎಸ್‌ನವರು. ಈ ವೀಡಿಯೋ ಪ್ರಕರಣದಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಆಹಾರವಾಗಿದ್ದಾರೆ.

ಇನ್ನು ಸಿಟಿ ರವಿ ಹೇಳಿಕೆನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಆತನ ಕೃತ್ಯ ತಿಳಿದಿದ್ದರು, ಆತನ ಪರ ಪ್ರಚಾರ ಮಾಡಿದ್ದೇಕೆ? ಆತನನ್ನು ಬೆಂಬಲಿಸಿದ್ದೇಕೆ? ಆತನ ಕುಕೃತ್ಯಕ್ಕೆ ಬಿಜೆಪಿಯ ಬೆಂಬಲವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸಿಟಿ ರವಿ ಅವರೇ ನಿಮ್ಮದೇ ಪಕ್ಷದ ಮುಖಂಡರು ಮಾಹಿತಿ ನೀಡಿದ ನಂತರವೂ ಮೋದಿಯವರು ಪ್ರಜ್ವಲ್‌ ಬೆನ್ನು ತಟ್ಟಿದ್ದೇಕೆ? ಆತನ ಸಾಧನೆ ಮೆಚ್ಚಿದರೇ? ಎಂದು ಆಕ್ರೋಶ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

7 mins ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

43 mins ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

1 hour ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

2 hours ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

3 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

3 hours ago