ರಾಜ್ಯ

ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್: ಆರ್‌.ಅಶೋಕ

ದಕ್ಷಿಣ ಕನ್ನಡ: ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ, ಜೈ ಶ್ರೀರಾಮ್‌ ಎಂದರೆ ತಪ್ಪು. ಕಾಂಗ್ರೆಸ್‌ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್‌.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರ.

ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಮತ್ತು ನಂದಕುಮಾರ್‌ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್‌ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್‌ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ, ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಈ ಘಟನೆ ನಡೆದ ನಂತರ ಪಾಕಿಸ್ತಾನದ ಕುರಿತು ಹೇಳಿದ್ದಾರೆಂದು ಆರೋಪಿಸಿ ಅಮಾಯಕ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಾಗೆ ಇದ್ದಲ್ಲಿ ಅದರ ಕುರಿತಾದ ವೀಡಿಯೋ ಅಥವಾ ಪುರಾವೆ ಬಿಡುಗಡೆ ಮಾಡಲಿ. ಭಾರತ್‌ ಮಾತಾ ಜೈ ಎನ್ನುವುದು ಬಿಟ್ಟರೆ ಬೇರಾವುದೇ ಘೋಷಣೆ ಕೂಗಿಲ್ಲ. ಇನ್ನೊಂದು ಪ್ರಕರಣ ದಾಖಲಿಸಿ ಮುಖ್ಯವಾದ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 20 ಪರ್ಸೆಂಟ್‌ ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ 80 ಪರ್ಸೆಂಟ್‌ ಹಣ ನುಂಗಿದ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ. ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರವಿದ್ದು, ಅಲ್ಲಿಗೂ ನಿಗಮದ ಹಣ ಸಂದಾಯವಾಗಿದೆ. ಆದ್ದರಿಂದ ಇದು ದೊಡ್ಡ ಭ್ರಷ್ಟಾಚಾರದ ಪ್ರಕರಣ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

22 mins ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

23 mins ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

25 mins ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

29 mins ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

33 mins ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

4 hours ago