ರಾಜ್ಯ

ಇಂದಿರಾ ಕ್ಯಾಂಟೀನ್‌ ಹೊಸ ಮೆನು, ಸಮಯ ಪ್ರಕಟ; ಏನೆಲ್ಲಾ ಲಭ್ಯ, ಬೆಲೆ ಎಷ್ಟು?

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ.

ಹಸಿದ ಹೊಟ್ಟೆಗೆ ಅಕ್ಷಯ ಪಾತ್ರೆ, ಅಗ್ಗದ ದರದಲ್ಲಿ ದೇಹಕ್ಕೆ ಒಗ್ಗುವ ಊಟ ಉಪಹಾರ ಎಂದು 5 ರೂಪಾಯಿಗಳಿಗೆ ಒಂದು ಪ್ಲೇಟ್‌ ಉಪಾಹಾರ, 10 ರೂಪಾಯಿಗೆ ಒಂದು ಪ್ಲೇಟ್‌ ಮಧ್ಯಾಹ್ನ ಊಟ ಹಾಗೂ 10 ರೂಪಾಯಿಗೆ ರಾತ್ರಿ ಊಟವನ್ನು ನೀಡಲು ಮುಂದಾಗಿದೆ.

ಬೆಳಗ್ಗಿನ ಉಪಹಾರ, ಪ್ಲೇಟ್‌ಗೆ 5 ರೂಪಾಯಿ ( ಬೆಳಗ್ಗೆ 7 ರಿಂದ 10 ): ಇಂಡ್ಲಿ – ಸಾಂಬಾರ್‌, ಇಂಡ್ಲಿ – ಚಟ್ನಿ, ವೆಜ್‌ ಪುಲಾವ್‌ – ರಾಯಿತಾ, ಖಾರಾಬಾತ್‌ – ಚಟ್ನಿ, ಚೌಚೌ ಬಾತ್‌ – ಚಟ್ನಿ, ಮಂಗಳೂರು ಬನ್ಸ್‌, ಬಿಸಿಬೇಳೆ ಬಾತ್‌ – ಬೂಂದಿ, ಪೊಂಗಲ್‌ – ಚಟ್ನಿ, ಬ್ರೆಡ್‌ – ಜಾಮ್‌ ಹಾಗೂ ಬನ್ಸ್. ವಿಶೇಷ: ಮಾವಿನಕಾಯಿ ಸೀಸನ್‌ನಲ್ಲಿ ಮಾವಿನಕಾಯಿ ಚಿತ್ರಾನ್ನ.

ಮಧ್ಯಾಹ್ನದ ಊಟ, ಪ್ಲೇಟ್‌ಗೆ 10 ರೂಪಾಯಿ ( ಮಧ್ಯಾಹ್ನ 1 ರಿಂದ 3 ): ಅನ್ನ – ತರಕಾರಿ ಸಾಂಬಾರು – ಖೀರು, ಅನ್ನ – ತರಕಾರಿ ಸಾಂಬಾರು – ರಾಯಿತಾ, ಅನ್ನ – ತರಕಾರಿ ಸಾಂಬಾರು – ಮೊಸರನ್ನ, ರಾಗಿಮುದ್ದೆ – ಸೊಪ್ಪಿನಸಾರು – ಖೀರು ಮತ್ತು ಚಪಾತಿ – ಸಾಗು – ಖೀರು.

ರಾತ್ರಿ ಊಟ, ಪ್ಲೇಟ್‌ಗೆ 10 ರೂಪಾಯಿ ( ಸಂಜೆ 7.30 ರಿಂದ ರಾತ್ರಿ 9 ) : ಅನ್ನ – ತರಕಾರಿ ಸಾಂಬಾರು, ಅನ್ನ – ತರಕಾರಿ ಸಾಂಬಾರು – ರಾಯಿತಾ, ರಾಗಿಮುದ್ದೆ – ಸೊಪ್ಪಿನಸಾರು ಮತ್ತು ಚಪಾತಿ ವೆಜ್‌ ಗ್ರೇವಿ.

andolana

Recent Posts

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

20 mins ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

45 mins ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

59 mins ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

2 hours ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

2 hours ago

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್‌ ಈಶ್ವರ್‌

ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ…

2 hours ago