ರಾಜ್ಯ

ಇಂದಿರಾ ಕ್ಯಾಂಟೀನ್‌ ಹೊಸ ಮೆನು, ಸಮಯ ಪ್ರಕಟ; ಏನೆಲ್ಲಾ ಲಭ್ಯ, ಬೆಲೆ ಎಷ್ಟು?

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ.

ಹಸಿದ ಹೊಟ್ಟೆಗೆ ಅಕ್ಷಯ ಪಾತ್ರೆ, ಅಗ್ಗದ ದರದಲ್ಲಿ ದೇಹಕ್ಕೆ ಒಗ್ಗುವ ಊಟ ಉಪಹಾರ ಎಂದು 5 ರೂಪಾಯಿಗಳಿಗೆ ಒಂದು ಪ್ಲೇಟ್‌ ಉಪಾಹಾರ, 10 ರೂಪಾಯಿಗೆ ಒಂದು ಪ್ಲೇಟ್‌ ಮಧ್ಯಾಹ್ನ ಊಟ ಹಾಗೂ 10 ರೂಪಾಯಿಗೆ ರಾತ್ರಿ ಊಟವನ್ನು ನೀಡಲು ಮುಂದಾಗಿದೆ.

ಬೆಳಗ್ಗಿನ ಉಪಹಾರ, ಪ್ಲೇಟ್‌ಗೆ 5 ರೂಪಾಯಿ ( ಬೆಳಗ್ಗೆ 7 ರಿಂದ 10 ): ಇಂಡ್ಲಿ – ಸಾಂಬಾರ್‌, ಇಂಡ್ಲಿ – ಚಟ್ನಿ, ವೆಜ್‌ ಪುಲಾವ್‌ – ರಾಯಿತಾ, ಖಾರಾಬಾತ್‌ – ಚಟ್ನಿ, ಚೌಚೌ ಬಾತ್‌ – ಚಟ್ನಿ, ಮಂಗಳೂರು ಬನ್ಸ್‌, ಬಿಸಿಬೇಳೆ ಬಾತ್‌ – ಬೂಂದಿ, ಪೊಂಗಲ್‌ – ಚಟ್ನಿ, ಬ್ರೆಡ್‌ – ಜಾಮ್‌ ಹಾಗೂ ಬನ್ಸ್. ವಿಶೇಷ: ಮಾವಿನಕಾಯಿ ಸೀಸನ್‌ನಲ್ಲಿ ಮಾವಿನಕಾಯಿ ಚಿತ್ರಾನ್ನ.

ಮಧ್ಯಾಹ್ನದ ಊಟ, ಪ್ಲೇಟ್‌ಗೆ 10 ರೂಪಾಯಿ ( ಮಧ್ಯಾಹ್ನ 1 ರಿಂದ 3 ): ಅನ್ನ – ತರಕಾರಿ ಸಾಂಬಾರು – ಖೀರು, ಅನ್ನ – ತರಕಾರಿ ಸಾಂಬಾರು – ರಾಯಿತಾ, ಅನ್ನ – ತರಕಾರಿ ಸಾಂಬಾರು – ಮೊಸರನ್ನ, ರಾಗಿಮುದ್ದೆ – ಸೊಪ್ಪಿನಸಾರು – ಖೀರು ಮತ್ತು ಚಪಾತಿ – ಸಾಗು – ಖೀರು.

ರಾತ್ರಿ ಊಟ, ಪ್ಲೇಟ್‌ಗೆ 10 ರೂಪಾಯಿ ( ಸಂಜೆ 7.30 ರಿಂದ ರಾತ್ರಿ 9 ) : ಅನ್ನ – ತರಕಾರಿ ಸಾಂಬಾರು, ಅನ್ನ – ತರಕಾರಿ ಸಾಂಬಾರು – ರಾಯಿತಾ, ರಾಗಿಮುದ್ದೆ – ಸೊಪ್ಪಿನಸಾರು ಮತ್ತು ಚಪಾತಿ ವೆಜ್‌ ಗ್ರೇವಿ.

andolana

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago