ರಾಜ್ಯ

ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳ್ಳಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ಹೇಳಿದ್ದರು.

ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಆದರೆ, ಅದರ ಬದಲಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರೇ ಮಾತನಾಡುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದರೆ, ಅದಕ್ಕೆ ಡಿಕೆ ಶಿವಕುಮಾರ್ ಕಾರಣ. ಆಪರೇಷನ್ ಕಮಲ ಮತ್ತು ಶಾಸಕರಿಗೆ 50 ಕೋಟಿ ಆಮಿಷ ನೀಡುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರು. ಆಪರೇಷನ್ ಕಮಲ ಎಂಬ ಪದವನ್ನು ಕಾಂಗ್ರೆಸ್ ಸೃಷ್ಟಿಸಿದೆ. ನೆರೆಯ ರಾಜ್ಯದಲ್ಲಿ ಅಜಿತ್ ಪವಾರ್ ಬಣ ಸಿಡಿದಂತೆಯೇ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾರಕಿಹೊಳಿ ಆರೋಪಿಸಿದ್ದರು.

ಅವರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಸ್ಥಿರವಾಗಿದೆ ಮತ್ತು ಬಿಜೆಪಿ ನಾಯಕರೊಬ್ಬರ ಹೇಳಿಕೆಯಿಂದ ಅದು ಪತನವಾಗಲು ಸಾಧ್ಯವಿಲ್ಲ ಎಂದು ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದು ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಜಾರಕಿಹೊಳಿ, ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪವನ್ನು ನಿರಾಕರಿಸಿದ್ದರು.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 hour ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

2 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

3 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

4 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

4 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

5 hours ago