ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ಹೇಳಿದ್ದರು.
ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಆದರೆ, ಅದರ ಬದಲಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರೇ ಮಾತನಾಡುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದರೆ, ಅದಕ್ಕೆ ಡಿಕೆ ಶಿವಕುಮಾರ್ ಕಾರಣ. ಆಪರೇಷನ್ ಕಮಲ ಮತ್ತು ಶಾಸಕರಿಗೆ 50 ಕೋಟಿ ಆಮಿಷ ನೀಡುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಡಿಕೆ ಶಿವಕುಮಾರ್ ಅವರ ನಾಟಕ ಕಂಪನಿಯವರು. ಆಪರೇಷನ್ ಕಮಲ ಎಂಬ ಪದವನ್ನು ಕಾಂಗ್ರೆಸ್ ಸೃಷ್ಟಿಸಿದೆ. ನೆರೆಯ ರಾಜ್ಯದಲ್ಲಿ ಅಜಿತ್ ಪವಾರ್ ಬಣ ಸಿಡಿದಂತೆಯೇ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾರಕಿಹೊಳಿ ಆರೋಪಿಸಿದ್ದರು.
ಅವರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಸ್ಥಿರವಾಗಿದೆ ಮತ್ತು ಬಿಜೆಪಿ ನಾಯಕರೊಬ್ಬರ ಹೇಳಿಕೆಯಿಂದ ಅದು ಪತನವಾಗಲು ಸಾಧ್ಯವಿಲ್ಲ ಎಂದು ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದೆ ಕಾಂಗ್ರೆಸ್ನಲ್ಲಿದ್ದು ನಾಲ್ಕು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ರಮುಖ ಪಾತ್ರ ವಹಿಸಿದ್ದ ಜಾರಕಿಹೊಳಿ, ಆಪರೇಷನ್ ಕಮಲದ ಬಗ್ಗೆ ಬಿಜೆಪಿ ಎಂದಿಗೂ ಮಾತನಾಡಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪವನ್ನು ನಿರಾಕರಿಸಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…