Mysore
20
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್‌

ಬೆಂಗಳೂರು:  ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಮಂಗಳಾರತಿ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋದೊಂದಿಗೆ ಮಾಹಿತಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

https://x.com/RAshokaBJP/status/1743946154960990631?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!