ರಾಜ್ಯ

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ೨೦೦ ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆದ ಕಾಂಗ್ರೆಸ್‌ ಸರ್ಕಾರ : ಆರ್‌.ಅಶೋಕ ಅನುಮಾನ

ಬೆಂಗಳೂರು : ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಸರ್ಕಾರ ಪಾರ್ಕಿಂಗ್‌ ಕಾಂಪ್ಲೆಕ್ಸ್‌, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ. ಇಂದಿರಾನಗರ, ಎಚ್‌ಎಸ್‌ಆರ್‌ ಲೇಔಟ್‌, ಆಸ್ಟಿನ್‌ ಟೌನ್‌, ಕೋರಮಂಗಲ, ವಿಜಯನಗರ, ಆರ್‌.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್‌ಗಳು ಬಿಡಿಎ ಸ್ವತ್ತು. ಈಗ ಇದನ್ನು ನುಂಗಣ್ಣಗಳು ನುಂಗಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಕಾಂಗ್ರೆಸ್‌ ಈ ಕಾರ್ಯಕ್ಕೆ ಮುಂದಾದಾಗ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ಈ ಕಾರ್ಯಕ್ಕೆ ಮುಂದಾಗಿದ್ದು, ಜನರು ಪ್ರತಿಭಟನೆ ಮಾಡಿದ್ದಾರೆ. ಇದರಲ್ಲಿ 200 ಕೋಟಿ ರೂ. ಗೂ ಅಧಿಕ ಕಿಕ್‌ಬ್ಯಾಕ್‌ ಇದೆ. ಇದು ಸುಮಾರು 3,000 ಕೋಟಿ ರೂ. ಮೌಲ್ಯದ ಆಸ್ತಿಗಳಾಗಿವೆ ಎಂದು ಹೇಳಿದರು.

ಸರ್ಕಾರವೇ ಹೀಗೆ ನುಂಗುವ ಕ್ರಮದ ವಿರುದ್ಧ ಪ್ರತಿಭಟಿಸಲಾಗುವುದು. ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಬೇರೆ ಮಾರ್ಗ ನೋಡಲಿ. ಕೂಡಲೇ ಈ ಟೆಂಡರ್‌ ರದ್ದುಪಡಿಸಲಿ. ಇಲ್ಲವಾದರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪನವರ ಸರ್ಕಾರ ಇದ್ದಾಗ ಈ ಕಡತ ಬಂದಿತ್ತು. ಇದು ಲೂಟಿ ಮಾಡುವ ಸ್ಕೀಮ್‌ ಎಂದಿದ್ದಕ್ಕೆ ಯಡಿಯೂರಪ್ಪ ಅದನ್ನು ವಾಪಸ್‌ ಕಳುಹಿಸಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರವಿದ್ದಾಗ ಈ ಲೂಟಿ ಮಾಫಿಯಾ ಮತ್ತೆ ಮುಂದೆ ಬಂದಿತ್ತು. ಆಗಲೂ ಮನವಿ ವಜಾ ಮಾಡಲಾಗಿತ್ತು. ಈಗ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಗೆ ಕಪ್ಪ ನೀಡಲು ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ. ಬೆಂಗಳೂರಿನ ಜನರು ಕೂಡ ಇದರ ವಿರುದ್ಧ ನಿಲ್ಲಬೇಕು ಎಂದು ಕೋರಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

7 mins ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

2 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

3 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

3 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

3 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

4 hours ago