ರಾಜ್ಯ

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ೨೦೦ ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆದ ಕಾಂಗ್ರೆಸ್‌ ಸರ್ಕಾರ : ಆರ್‌.ಅಶೋಕ ಅನುಮಾನ

ಬೆಂಗಳೂರು : ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಸರ್ಕಾರ ಪಾರ್ಕಿಂಗ್‌ ಕಾಂಪ್ಲೆಕ್ಸ್‌, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ. ಇಂದಿರಾನಗರ, ಎಚ್‌ಎಸ್‌ಆರ್‌ ಲೇಔಟ್‌, ಆಸ್ಟಿನ್‌ ಟೌನ್‌, ಕೋರಮಂಗಲ, ವಿಜಯನಗರ, ಆರ್‌.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್‌ಗಳು ಬಿಡಿಎ ಸ್ವತ್ತು. ಈಗ ಇದನ್ನು ನುಂಗಣ್ಣಗಳು ನುಂಗಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಕಾಂಗ್ರೆಸ್‌ ಈ ಕಾರ್ಯಕ್ಕೆ ಮುಂದಾದಾಗ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ಈ ಕಾರ್ಯಕ್ಕೆ ಮುಂದಾಗಿದ್ದು, ಜನರು ಪ್ರತಿಭಟನೆ ಮಾಡಿದ್ದಾರೆ. ಇದರಲ್ಲಿ 200 ಕೋಟಿ ರೂ. ಗೂ ಅಧಿಕ ಕಿಕ್‌ಬ್ಯಾಕ್‌ ಇದೆ. ಇದು ಸುಮಾರು 3,000 ಕೋಟಿ ರೂ. ಮೌಲ್ಯದ ಆಸ್ತಿಗಳಾಗಿವೆ ಎಂದು ಹೇಳಿದರು.

ಸರ್ಕಾರವೇ ಹೀಗೆ ನುಂಗುವ ಕ್ರಮದ ವಿರುದ್ಧ ಪ್ರತಿಭಟಿಸಲಾಗುವುದು. ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಬೇರೆ ಮಾರ್ಗ ನೋಡಲಿ. ಕೂಡಲೇ ಈ ಟೆಂಡರ್‌ ರದ್ದುಪಡಿಸಲಿ. ಇಲ್ಲವಾದರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪನವರ ಸರ್ಕಾರ ಇದ್ದಾಗ ಈ ಕಡತ ಬಂದಿತ್ತು. ಇದು ಲೂಟಿ ಮಾಡುವ ಸ್ಕೀಮ್‌ ಎಂದಿದ್ದಕ್ಕೆ ಯಡಿಯೂರಪ್ಪ ಅದನ್ನು ವಾಪಸ್‌ ಕಳುಹಿಸಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರವಿದ್ದಾಗ ಈ ಲೂಟಿ ಮಾಫಿಯಾ ಮತ್ತೆ ಮುಂದೆ ಬಂದಿತ್ತು. ಆಗಲೂ ಮನವಿ ವಜಾ ಮಾಡಲಾಗಿತ್ತು. ಈಗ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಗೆ ಕಪ್ಪ ನೀಡಲು ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ. ಬೆಂಗಳೂರಿನ ಜನರು ಕೂಡ ಇದರ ವಿರುದ್ಧ ನಿಲ್ಲಬೇಕು ಎಂದು ಕೋರಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago