ರಾಜ್ಯ

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ೨೦೦ ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆದ ಕಾಂಗ್ರೆಸ್‌ ಸರ್ಕಾರ : ಆರ್‌.ಅಶೋಕ ಅನುಮಾನ

ಬೆಂಗಳೂರು : ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಹಿಂದೆ ಸರ್ಕಾರ ಪಾರ್ಕಿಂಗ್‌ ಕಾಂಪ್ಲೆಕ್ಸ್‌, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ. ಇಂದಿರಾನಗರ, ಎಚ್‌ಎಸ್‌ಆರ್‌ ಲೇಔಟ್‌, ಆಸ್ಟಿನ್‌ ಟೌನ್‌, ಕೋರಮಂಗಲ, ವಿಜಯನಗರ, ಆರ್‌.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್‌ಗಳು ಬಿಡಿಎ ಸ್ವತ್ತು. ಈಗ ಇದನ್ನು ನುಂಗಣ್ಣಗಳು ನುಂಗಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಕಾಂಗ್ರೆಸ್‌ ಈ ಕಾರ್ಯಕ್ಕೆ ಮುಂದಾದಾಗ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ಈ ಕಾರ್ಯಕ್ಕೆ ಮುಂದಾಗಿದ್ದು, ಜನರು ಪ್ರತಿಭಟನೆ ಮಾಡಿದ್ದಾರೆ. ಇದರಲ್ಲಿ 200 ಕೋಟಿ ರೂ. ಗೂ ಅಧಿಕ ಕಿಕ್‌ಬ್ಯಾಕ್‌ ಇದೆ. ಇದು ಸುಮಾರು 3,000 ಕೋಟಿ ರೂ. ಮೌಲ್ಯದ ಆಸ್ತಿಗಳಾಗಿವೆ ಎಂದು ಹೇಳಿದರು.

ಸರ್ಕಾರವೇ ಹೀಗೆ ನುಂಗುವ ಕ್ರಮದ ವಿರುದ್ಧ ಪ್ರತಿಭಟಿಸಲಾಗುವುದು. ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಬೇರೆ ಮಾರ್ಗ ನೋಡಲಿ. ಕೂಡಲೇ ಈ ಟೆಂಡರ್‌ ರದ್ದುಪಡಿಸಲಿ. ಇಲ್ಲವಾದರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪನವರ ಸರ್ಕಾರ ಇದ್ದಾಗ ಈ ಕಡತ ಬಂದಿತ್ತು. ಇದು ಲೂಟಿ ಮಾಡುವ ಸ್ಕೀಮ್‌ ಎಂದಿದ್ದಕ್ಕೆ ಯಡಿಯೂರಪ್ಪ ಅದನ್ನು ವಾಪಸ್‌ ಕಳುಹಿಸಿದ್ದರು. ಬಸವರಾಜ ಬೊಮ್ಮಾಯಿ ಸರ್ಕಾರವಿದ್ದಾಗ ಈ ಲೂಟಿ ಮಾಫಿಯಾ ಮತ್ತೆ ಮುಂದೆ ಬಂದಿತ್ತು. ಆಗಲೂ ಮನವಿ ವಜಾ ಮಾಡಲಾಗಿತ್ತು. ಈಗ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಗೆ ಕಪ್ಪ ನೀಡಲು ಆಸ್ತಿ ಲೂಟಿ ಮಾಡಲು ಹೊರಟಿದ್ದಾರೆ. ಬೆಂಗಳೂರಿನ ಜನರು ಕೂಡ ಇದರ ವಿರುದ್ಧ ನಿಲ್ಲಬೇಕು ಎಂದು ಕೋರಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

5 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

5 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago