ರಾಜ್ಯ

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ : ಅಶೋಕ್‌ ಟೀಕೆ

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರ್ಕಾರ ತಿಳಿಸಿದರೆ, ಗಿನ್ನೆಸ್‌ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿ, ಒಂದು ಲೇಯರ್‌ ಡಾಂಬರೀಕರಣ ಮಾಡಿ ಎಂದು ಸೂಚನೆ ನೀಡಿದ್ದಾರೆ. ಇದಕ್ಕೆ 4-5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳವೇ ಇಲ್ಲ. ಇನ್ನು ಇಷ್ಟೊಂದು ಹಣ ಎಲ್ಲಿದೆ? ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್‌ ಆಗುತ್ತಿಲ್ಲ. ಆದ್ದರಿಂದ ಬೆಂಗಳೂರು ಗ್ರೇಟರ್‌ ಪ್ರಾಧಿಕಾರವನ್ನು ಮುಂದೆ ನಾವು ರದ್ದು ಮಾಡುತ್ತೇವೆ ಎಂದರು.

ಸುರಂಗ ರಸ್ತೆ ಅಸಾಧ್ಯ
ನಗರದ ಶ್ವಾಸಕೋಶದಂತಿರುವ ಲಾಲ್‌ಬಾಗ್‌ನಲ್ಲಿ ಐದಾರು ಎಕರೆ ಪಡೆದು ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ನಗರಕ್ಕೆ ಹಸಿರು ನೀಡುವ ಇಂತಹ ಉದ್ಯಾನದಲ್ಲಿ ಸುರಂಗ ಕೊರೆಯಬಾರದು. ಈ ಯೋಜನೆಯಿಂದ ಅಂತರ್ಜಲಕ್ಕೆ ಧಕ್ಕೆಯಾಗುತ್ತದೆ. ಕೆಂಪೇಗೌಡ ಗೋಪುರ ಲಾಲ್‌ಬಾಗ್‌ನಲ್ಲಿದ್ದು, ಅದನ್ನೂ ಸರ್ಕಾರ ಒಡೆದುಹಾಕಬಹುದು. ವಿಜ್ಞಾನಿಗಳು, ಪರಿಸರವಾದಿಗಳು ಏನು ಹೇಳಿದ್ದಾರೆ ಎಂದು ಸರ್ಕಾರ ನೋಡಬೇಕಿದೆ. ಎತ್ತಿನಹೊಳೆ ಯೋಜನೆಯೇ ಇನ್ನೂ ಅನುಷ್ಠಾನವಾಗಿಲ್ಲ. ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ. ಇದರ ವಿರುದ್ಧ ಬಿಜೆಪಿ ಶಾಸಕರೊಂದಿಗೆ ಹೋರಾಟ ಮಾಡಲಾಗುವುದು ಎಂದರು.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಮಳೆಯಿಂದಾಗಿ ಬೆಳೆ ಹಾನಿ ಪರಿಹಾರವನ್ನು ಇನ್ನೂ ಕೊಟ್ಟಿಲ್ಲ. ಜೊತೆಗೆ ಸೋಯಾ, ಸೂರ್ಯಕಾಂತಿ, ಉದ್ದು, ಹೆಸರು ಮೊದಲಾದ ಬೆಳೆಗಳನ್ನು ಸರ್ಕಾರ ಖರೀದಿಸಬೇಕಿತ್ತು. ಈ ಕುರಿತು ಕೂಡಲೇ ಸರ್ಕಾರ ಕ್ರಮ ವಹಿಸಬೇಕು. ಬೆಲೆ ಕುಸಿದಿರುವ ಈರುಳ್ಳಿಯನ್ನು ಕೂಡಲೇ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.

2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ ಶೇ.30% ಮಾತ್ರ ಅನುದಾನ ಬಳಕೆಯಾಗಿದೆ. ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್‌ಡಿಪಿಆರ್ ಇಲಾಖೆಯಲ್ಲಿ ಕೇವಲ ಶೇ.11.02% ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86% ಅನುದಾನ ಬಳಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಶೇ.46, ಪಶುಸಂಗೋಪನೆಯಲ್ಲಿ ಶೇ.44, ಗ್ರಾಮೀಣಾಭಿವೃದ್ಧಿಯಲ್ಲಿ ಶೇ.11 ಹೀಗೆ ಎಲ್ಲ ಇಲಾಖೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದು ಟೀಕಿಸಿದರು.

ಈಗಾಗಲೇ ನಿವೇಶನ ಪಡೆದವರಿಗೆ ಎ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಸ್ಕೀಮ್‌ ಎಂದರು.

ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದ್ದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

7 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

8 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago