ಬೆಂಗಳೂರು : ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೋದ್ಮೇಲೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಬೊಮ್ಮಾಯಿ ಬಂದರು. ಈ ಹಿಂದೆ ಸಿಎಂ ಆಗಿದ್ದಾಗ ಜಾತಿಗಣತಿಗೆ 165 ಕೋಟಿ ರೂ. ಖರ್ಚು ಮಾಡಿದ್ದೆ ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರ ಇದ್ದಾಗ ವರದಿ ಬಿಡುಗಡೆ ಮಾಡಿದ್ರೆ ತೆಗೆದುಹಾಕ್ತೀವಿ ಅಂತಾ ಅಧಿಕಾರಿಗಳಿಗೆ ಹೆಚ್ಡಿ ಕುಮಾರಸ್ವಾಮಿ ಹೆದರಿಸಿದ್ದರು. ನವೆಂಬರ್ನಲ್ಲಿ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ವರದಿ ಕೊಡುತ್ತಾರೆ. ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಆಗಬೇಕಾದರೆ ಜಾತಿಗಣತಿ ಮುಖ್ಯ. 90ರ ದಶಕದಲ್ಲೇ ಜಾತಿಗಣತಿ ನಿಲ್ಲಿಸಿಬಿಟ್ಟರು. ಆಗಿನಿಂದ ಆಗಲೇ ಇಲ್ಲ ಎಂದು ಹೇಳಿದ್ದಾರೆ.
ಮೆಡಿಕಲ್ ಕಾಲೇಜು ವಿಚಾರವಾಗಿ ಮಾತನಾಡಿದ ಅವರು, ಜಾಗ ಪುಕ್ಕಟೆ ಕೊಡುತ್ತೇವೆ ಎಂದು ಎಂಟಿಬಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಮುಂದಾಗಿಲ್ಲ. ಏನಪ್ಪ ನಿಮ್ಮಪ್ಪನಿಗೆ ಹೇಳಿದ್ದೆ ಅಲ್ವಾ ಎಂದು ವೇದಿಕೆ ಮೇಲಿದ್ದ ಎಂಟಿಬಿ ಪುತ್ರನನ್ನು ಪ್ರಶ್ನಿಸಿದರು. ಕ್ಷೀರಭಾಗ್ಯ, ಅನ್ನಭಾಗ್ಯ, ವಿದ್ಯಾಸಿರಿ ಬಡವರಿಗೆ ಅನುಕೂಲ ಆಗಲಿ ಅಂತ ಮಾಡಿದೆ. ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 1 ಲಕ್ಷ ರೂ. ಗೆ 2% ಬಡ್ಡಿಯಂತೆ ನೀಡಿದ್ದು ನಾವು ತಾನೆ. ಆಗ ನಾನು ಅಡುಗೆ ಮಾಡಿಕೊಂಡು, ರೂಂನಲ್ಲಿ ಇದ್ದುಕೊಂಡು ಓದುತ್ತಿದೆ. ಹೀಗಾಗಿಯೇ ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ. ಹಿಂದುಳಿದ ಜಾತಿಗಳಿಗೆ ಆರ್ಥಿಕವಾಗಿ ಶಕ್ತಿ ಬರಲು ಈ ಯೋಜನೆ. ಪ್ರತಿ ವರ್ಷ 15 ಸಾವಿರ ವಿದ್ಯಾರ್ಥಿ ವೇತನ ನೀಡುವ ಕೆಲಸ ಮಾಡಿದೆ ಎಂದು ತಿಳಿಸಿದರು.
ರೈತರ, ಸರ್ಕಾರಿ ನೌಕಕರು ಮಕ್ಕಳು, ಕೂಲಿ ಕಾರ್ಮಿಕರು, ಪೊಲೀಸರ ಮಕ್ಕಳು ಸೇರಿ ಒಟ್ಟು 170 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ. ಮುಂದಿನ ವರ್ಷ 200 ವಿದ್ಯಾರ್ಥಿಗಳಿಗೆ ನೀಡಲಿ. ಆಗ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳಲ್ಲಿ ಹೆಚ್ಚು ಹುದ್ದೆಗಳು ಖಾಲಿಯಿತ್ತು, ವೈದ್ಯರಿರಲಿಲ್ಲ. ಈಗ ವೈದ್ಯರು ಹೆಚ್ಚಿದ್ದಾರೆ, ಹುದ್ದೆಗಳು ಖಾಲಿ ಇಲ್ಲ. ಸಮಾಜದ ಋಣ ತೀರಿಸುವುದು ನಮ್ಮೆಲ್ಲರ ಕರ್ತವ್ಯ. ಸಮಾಜಕ್ಕೆ ಆಸ್ತಿಯಾಗಿ ಅಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು ಹೇಳಿದ್ದಾರೆ.
ಸಮಾಜದ ಎಲ್ಲರಿಗೂ ಶಿಕ್ಷಣ ದೊರಕಬೇಕು. ಯಾವುದೇ ಕ್ಷೇತ್ರದಲ್ಲಿ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಅಕ್ಷರ ಕಲಿಯಲೇ ಬೇಕು. ಯಾರೂ ಮೇದಾವಿಗಳಲ್ಲಿ ಅವಕಾಶದಿಂದ ವಂಚಿತರಾದರೆ ಅವರು ದಡ್ಡರಾಗುತ್ತಾರೆ. ನಮ್ಮ ಸಮಾಜದಲ್ಲಿ ಬಹುತೇಕರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇಡೀ ನಮ್ಮೂರಿಗೆ ನಾನೇ ಮೊದಲು ಲಾಯರ್. ಅನೇಕರು ಪದವೀಧರರಾಗಿದ್ದರೂ ನಾನೇ ಲಾಯರ್.
ನಮ್ಮಪ್ಪ ಚೆನ್ನಪ್ಪಯ್ಯ ಅಂತ ಶಾನುಭೋಗರ ಮಾತನ್ನ ಬಹಳ ಕೇಳುತ್ತಿದ್ದರು. ಎಂಎಸ್ಸಿ ನನಗೆ ಸೀಟ್ ಸಿಕ್ಕಿರಲಿಲ್ಲ, ಆಗ ವ್ಯವಸಾಯ ಮಾಡೋಕೆ ಹೋದೆ. ನೀನು ಕುರುಬ, ಲಾಯರ್ ಆಗಿ ಕೆಲಸ ಮಾಡೋಕೆ ಆಗುತ್ತಾ? ನಮ್ಮಪ್ಪ ಚೆನ್ನಪ್ಪಯ್ಯ ಮಾತು ಕೇಳಿ ನೀನು ಲಾ ಮಾಡ್ಬೇಡ ಅಂದ್ರು. ಆಮೇಲೆ ಪಂಚಾಯಿತಿ ಸೇರಿಸಿ ಊರಿನವರಿಗೆಲ್ಲ ಹೇಳಿದೆ. ಭಾಗ ಕೊಟ್ಟು ಬಿಡಪ್ಪ ಅಂದೆ, ಅದಕ್ಕೆ ಲಾ ಸೇರಿಸಿದರು ಎಂದು ಹೇಳಿದ್ದಾರೆ.
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…