ರಾಜ್ಯ

ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ: ಬಿಜೆಪಿ ಆರೋಪ

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ.

ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿಯೇ 21 ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯ ಸರ್ಕಾರವು ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಿಲ್ಲ. ರಾಜ್ಯದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದಿದೆ.

ರಾಜ್ಯದಲ್ಲಿ ಹಾವು, ಚೇಳು ಕಡಿತದಿಂದ ರೈತರು ಮತ್ತು ಅವರ ಮಕ್ಕಳು ಸಾಯುತ್ತಿದ್ದಾರೆ. ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆಗಾಗ ಪವರ್ಕಟ್ ಆಗುತ್ತಿದ್ದು, ಮಧ್ಯರಾತ್ರಿಯಲ್ಲಿ ಅದರ ಪೂರೈಕೆಯನ್ನು ಪುನಃ ಸ್ಥಾಪಿಸಲಾಗುತ್ತದೆ. ರೈತರಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕೂಡ ರಾಜ್ಯ ಸರ್ಕಾರ ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರರು ಹೈಕೋರ್ಟ್‍ನಲ್ಲಿ ಅನುಮತಿ ಪಡೆಯಬೇಕಾಯಿತು ಎಂದು ತಿಳಿಸಿದೆ.

ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿರುವುದು ಸಿದ್ದರಾಮಯ್ಯನವರ ಕನ್ನಡ ಪ್ರೇಮ ಮತ್ತು ಅಭಿಮಾನದ ಹಿಂದಿನ ವಾಸ್ತವವನ್ನು ಬಯಲು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 60 ವರ್ಷಗಳ ಕಾಲ ರಾಜ್ಯವನ್ನು ಆಳಿದರೂ, ಕನ್ನಡ ಮತ್ತು ಅದರ ಹೆಮ್ಮೆಯನ್ನು ರಕ್ಷಿಸುವಲ್ಲಿ ಯಾವಾಗಲೂ ವಿಫಲವಾಗಿದೆ ಎಂದು ಟೀಕಿಸಿದೆ.

ಕನ್ನಡಾಭಿಮಾನದ ಜ್ಯೋತಿಯಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವ ಬದಲು ತಮಿಳುನಾಡಿನಲ್ಲಿ ಐಎನ್‍ಡಿಐಎ ಮೈತ್ರಿಕೂಟದ ಪಾಲುದಾರ ಡಿಎಂಕೆ ಸರ್ಕಾರವನ್ನು ಸಮಾಧಾನಪಡಿಸಲು ಕಾವೇರಿ ನದಿ ಪಾತ್ರದ ಎಲ್ಲ ಜಲಾಶಯಗಳಿಂದ ಸದ್ದಿಲ್ಲದೆ ನೀರು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಲು ಅರೆಬೆಂದ ದತ್ತಾಂಶಗಳಿಂದ ತುಂಬಿದ ಕಥೆಗಳನ್ನು ಹೆಣೆಯುವ ಮತ್ತು ಹಸಿ ಸುಳ್ಳನ್ನು ಹೇಳುವ ಕೆಟ್ಟ ಅಭ್ಯಾಸವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

3 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

3 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

3 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

3 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

3 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

3 hours ago