ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ.
ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿಯೇ 21 ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯ ಸರ್ಕಾರವು ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಿಲ್ಲ. ರಾಜ್ಯದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದಿದೆ.
ರಾಜ್ಯದಲ್ಲಿ ಹಾವು, ಚೇಳು ಕಡಿತದಿಂದ ರೈತರು ಮತ್ತು ಅವರ ಮಕ್ಕಳು ಸಾಯುತ್ತಿದ್ದಾರೆ. ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆಗಾಗ ಪವರ್ಕಟ್ ಆಗುತ್ತಿದ್ದು, ಮಧ್ಯರಾತ್ರಿಯಲ್ಲಿ ಅದರ ಪೂರೈಕೆಯನ್ನು ಪುನಃ ಸ್ಥಾಪಿಸಲಾಗುತ್ತದೆ. ರೈತರಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದೆ.
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕೂಡ ರಾಜ್ಯ ಸರ್ಕಾರ ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರರು ಹೈಕೋರ್ಟ್ನಲ್ಲಿ ಅನುಮತಿ ಪಡೆಯಬೇಕಾಯಿತು ಎಂದು ತಿಳಿಸಿದೆ.
ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿರುವುದು ಸಿದ್ದರಾಮಯ್ಯನವರ ಕನ್ನಡ ಪ್ರೇಮ ಮತ್ತು ಅಭಿಮಾನದ ಹಿಂದಿನ ವಾಸ್ತವವನ್ನು ಬಯಲು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 60 ವರ್ಷಗಳ ಕಾಲ ರಾಜ್ಯವನ್ನು ಆಳಿದರೂ, ಕನ್ನಡ ಮತ್ತು ಅದರ ಹೆಮ್ಮೆಯನ್ನು ರಕ್ಷಿಸುವಲ್ಲಿ ಯಾವಾಗಲೂ ವಿಫಲವಾಗಿದೆ ಎಂದು ಟೀಕಿಸಿದೆ.
ಕನ್ನಡಾಭಿಮಾನದ ಜ್ಯೋತಿಯಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವ ಬದಲು ತಮಿಳುನಾಡಿನಲ್ಲಿ ಐಎನ್ಡಿಐಎ ಮೈತ್ರಿಕೂಟದ ಪಾಲುದಾರ ಡಿಎಂಕೆ ಸರ್ಕಾರವನ್ನು ಸಮಾಧಾನಪಡಿಸಲು ಕಾವೇರಿ ನದಿ ಪಾತ್ರದ ಎಲ್ಲ ಜಲಾಶಯಗಳಿಂದ ಸದ್ದಿಲ್ಲದೆ ನೀರು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಲು ಅರೆಬೆಂದ ದತ್ತಾಂಶಗಳಿಂದ ತುಂಬಿದ ಕಥೆಗಳನ್ನು ಹೆಣೆಯುವ ಮತ್ತು ಹಸಿ ಸುಳ್ಳನ್ನು ಹೇಳುವ ಕೆಟ್ಟ ಅಭ್ಯಾಸವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…