ರಾಜ್ಯ

ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ: ಬಿಜೆಪಿ ಆರೋಪ

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ.

ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿಯೇ 21 ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ರಾಜ್ಯ ಸರ್ಕಾರವು ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಿಲ್ಲ. ರಾಜ್ಯದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಸ್ಥಾಪಿಸಲು ಹಣವನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದಿದೆ.

ರಾಜ್ಯದಲ್ಲಿ ಹಾವು, ಚೇಳು ಕಡಿತದಿಂದ ರೈತರು ಮತ್ತು ಅವರ ಮಕ್ಕಳು ಸಾಯುತ್ತಿದ್ದಾರೆ. ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆಗಾಗ ಪವರ್ಕಟ್ ಆಗುತ್ತಿದ್ದು, ಮಧ್ಯರಾತ್ರಿಯಲ್ಲಿ ಅದರ ಪೂರೈಕೆಯನ್ನು ಪುನಃ ಸ್ಥಾಪಿಸಲಾಗುತ್ತದೆ. ರೈತರಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಕೂಡ ರಾಜ್ಯ ಸರ್ಕಾರ ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರರು ಹೈಕೋರ್ಟ್‍ನಲ್ಲಿ ಅನುಮತಿ ಪಡೆಯಬೇಕಾಯಿತು ಎಂದು ತಿಳಿಸಿದೆ.

ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನಿರಾಕರಿಸಿರುವುದು ಸಿದ್ದರಾಮಯ್ಯನವರ ಕನ್ನಡ ಪ್ರೇಮ ಮತ್ತು ಅಭಿಮಾನದ ಹಿಂದಿನ ವಾಸ್ತವವನ್ನು ಬಯಲು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 60 ವರ್ಷಗಳ ಕಾಲ ರಾಜ್ಯವನ್ನು ಆಳಿದರೂ, ಕನ್ನಡ ಮತ್ತು ಅದರ ಹೆಮ್ಮೆಯನ್ನು ರಕ್ಷಿಸುವಲ್ಲಿ ಯಾವಾಗಲೂ ವಿಫಲವಾಗಿದೆ ಎಂದು ಟೀಕಿಸಿದೆ.

ಕನ್ನಡಾಭಿಮಾನದ ಜ್ಯೋತಿಯಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವ ಬದಲು ತಮಿಳುನಾಡಿನಲ್ಲಿ ಐಎನ್‍ಡಿಐಎ ಮೈತ್ರಿಕೂಟದ ಪಾಲುದಾರ ಡಿಎಂಕೆ ಸರ್ಕಾರವನ್ನು ಸಮಾಧಾನಪಡಿಸಲು ಕಾವೇರಿ ನದಿ ಪಾತ್ರದ ಎಲ್ಲ ಜಲಾಶಯಗಳಿಂದ ಸದ್ದಿಲ್ಲದೆ ನೀರು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಲು ಅರೆಬೆಂದ ದತ್ತಾಂಶಗಳಿಂದ ತುಂಬಿದ ಕಥೆಗಳನ್ನು ಹೆಣೆಯುವ ಮತ್ತು ಹಸಿ ಸುಳ್ಳನ್ನು ಹೇಳುವ ಕೆಟ್ಟ ಅಭ್ಯಾಸವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

22 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago