ರಾಜ್ಯ

ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಮಂಗಳವಾರ(ಆ.3) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರಾಗಿದೆ ಎಂದು ದೂರಿದರು.

ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್‌ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್‌ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್‌ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

3 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

3 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

3 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

3 hours ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

3 hours ago