ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಇಂದು (ಅಕ್ಟೋಬರ್ 9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷದವರಿಗೆ ಸರ್ಕಾರ ರಚನೆಯಾದ ಇಲ್ಲಿಯವರೆಗೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದು ಹೇಳುವುದು ಹೊಸ ವಿಷಯವೇನಲ್ಲಾ. ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ 18 ತಿಂಗಳು ಕಳೆದಿವೆ. ವಿಪಕ್ಷದವರು ಹೇಳಿದಾಕ್ಷಣ ಸರ್ಕಾರ ಬೀಳಲ್ಲ ಎಂದು ತೀರುಗೇಟು ನೀಡಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ ಅವರ ಹೇಳೀಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮುಡಾ ಹಗರಣಕ್ಕೂ ಹರಿಯಾಣ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಮುಡಾ ಪ್ರಕರಣ ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ತನಿಖಾ ತಂಡ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…