ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಇಂದು (ಅಕ್ಟೋಬರ್ 9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷದವರಿಗೆ ಸರ್ಕಾರ ರಚನೆಯಾದ ಇಲ್ಲಿಯವರೆಗೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದು ಹೇಳುವುದು ಹೊಸ ವಿಷಯವೇನಲ್ಲಾ. ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ 18 ತಿಂಗಳು ಕಳೆದಿವೆ. ವಿಪಕ್ಷದವರು ಹೇಳಿದಾಕ್ಷಣ ಸರ್ಕಾರ ಬೀಳಲ್ಲ ಎಂದು ತೀರುಗೇಟು ನೀಡಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ ಅವರ ಹೇಳೀಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮುಡಾ ಹಗರಣಕ್ಕೂ ಹರಿಯಾಣ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಮುಡಾ ಪ್ರಕರಣ ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ತನಿಖಾ ತಂಡ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…