ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ.
ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ ಪಕ್ಷದ ಮುಖಂಡ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ಸರ್ಕಾರ ಬೀಳಲ್ಲ ಎಂದಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು “ಲೋಕಸಭೆ ಚುನಾವಣೆಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬುದನ್ನು ನಾನು ಒಪ್ಪಲಾರೆ, ಕಾಂಗ್ರೆಸ್ ಸರ್ಕಾರ 5 ವರ್ಷ ನಡೀಲಿ ಬಿಡ್ರಿ. ಜನರು ಕಾಂಗ್ರೆಸ್ ಪಕ್ಷವನ್ನು ಆರಿಸಿದ್ದಾರೆ. ನಾವು ಆಪರೇಷನ್ ಕಮಲ ಮಾಡಲ್ಲ. ಜನರು ಅದನ್ನು ಒಪ್ಪುವುದೂ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…