ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತದೆ. ಆದರೆ ಯಾವಾಗ ಅನ್ನೋದನ್ನು ಹೇಳಲು ಬರೋದಿಲ್ಲ ಎಂದರು.
ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕಲು ಬಿಜೆಪಿ ಮೇಲೆ ಬೆರಳು ತೋರಿಸುತ್ತಿದೆ. ಸರ್ಕಾರದ ವ್ಯಾಪ್ತಿಯಲ್ಲೇ ಹಗರಣಗಳನ್ನು ಮುಚ್ಚಿಹಾಕುವ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಕೇವಲ ನಾಗೇಂದ್ರ ಅವರ ತಲೆದಂಡ ಆಯ್ತು. ಅದನ್ನು ಬಿಟ್ಟು ಮತ್ತೇನೂ ಬೆಳವಣಿಗೆ ಆಗಿಲ್ಲ. ನೆಪಮಾತ್ರಕ್ಕೆ ತನಿಖೆ ನಡೆಯುತ್ತಿದೆ. ಆದರೆ ಅದರಿಂದ ಹೆಚ್ಚಿನ ನಿರೀಕ್ಷೆಯೇನು ಇಲ್ಲ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…