ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಭಾರೀ ಖತರ್ನಾಕ್ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು, ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕೆಆರ್ಎಸ್ ಪಕ್ಕ ಅಮ್ಯೂಸ್ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಕೋಟಿ ರೂ ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ. ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್ನವರು ಅಪರೂಪದ ಪೀಸ್ಗಳು ಎಂದು ವಾಗ್ದಾಳಿ ನಡೆಸಿದರು.
ಇನ್ನು ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್ಗಳನ್ನು ಮುಚ್ಚಿ ನೋಡೋಣ. ಇದೇ ಕಾಂಗ್ರೆಸ್ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…