ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಫೈಟ್ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಈ ವಿಚಾರದಲ್ಲಿ ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಈಗ ಸಿಎಂ ಸ್ಥಾನಕ್ಕೆ ಒಳಗೊಳಗೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ. ಆದ್ದರಿಂದ ಬಹಳ ದಿನ ಈ ಸರ್ಕಾರ ಉಳಿಯಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂದು ಲೇವಡಿ ಮಾಡಿದರು.
ಇನ್ನು ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ದಾಖಲೆ ಮಾಡಲು ಹೊರಟಿದ್ದಾರೆ. ಅರಸು ಅವರಿಗಿಂತ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ ಎಂದು ಸಾಬೀತು ಮಾಡಲು ಹೊರಟಿದ್ದಾರೆ. ಆದರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಗರಣಗಳು ಎಗ್ಗಿಲ್ಲದೇ ನಡೆಯುತ್ತಿವೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…