ರಾಜ್ಯ

ಪೆಟ್ರೋಲ್-ಡೀಸೆಲ್‌ ಬೆಲೆ ಏರಿಕೆ ಮಾಡಿ ಕಾಂಗ್ರೆಸ್‌ ಸರ್ಕಾರ ಜನರನ್ನು ವಂಚಿಸಿದೆ: ಸೋಮಣ್ಣ

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ ಅಂತ ಕುಮಾರಸ್ವಾಮಿಯವರು ಹೇಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ನೂತನ ಸಂಸದರಿಗೆ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರದ ಭ್ರಷ್ಟಾ‌ಚಾರದಿಂದ ಜನ ಬೇಸತ್ತು ಹೋಗಿದ್ದಾರೆ, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಜನರನ್ನು ವಂಚಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿರೋದು ಕಾಂಗ್ರೆಸ್ ನಾಯಕರ ನಿದ್ದೆ ಹಾಳುಮಾಡಿದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಿಂದ ನಾನು ಸೋಲುತ್ತೇನೆ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ ಕ್ಷೇತ್ರದ ಬುದ್ಧಿಜೀವಿಗಳು, ಬಡವರು ಮತ್ತು ಕಡುಬಡುವರು ನನ್ನನ್ನ ಕೈಹಿಡಿದರು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ನಾನು ಗೆಲ್ಲುವುದು ಸಾಧ್ಯವಾಯಿತು. ಕನಿಷ್ಟ 15 ಸೀಟು ಗೆಲ್ಲುತ್ತೇವೆ ಎಂದಿದ್ದ ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು 19ಸೀಟುಗಳನ್ನು ಗೆದ್ದಿತು ಎಂದು ಹೇಳಿದರು.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago