ರಾಜ್ಯ

ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್‌ಗೆ ಅಪರಾಧಿ ಪ್ರಜ್ಞೆಯಿದೆ: ಪ್ರತಾಪ್‌ ಸಿಂಹ

ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಿರ್ಣಯಿಸಿದ ಬಗ್ಗೆ ಮಾತನಾಡಿದ ಅವರು, ರಾಮನಿಗಾಗಿ, ರಾಮ ಜನ್ಮಭೂಮಿಗಾಗಿ ರಥಯಾತ್ರೆಯನ್ನು ಎಲ್‌.ಕೆ ಅಡ್ವಾಣಿ ಅವರು ಮಾಡಿದರು. ರವಿಶಂಕರ್‌ ಪ್ರಸಾದ್‌ ಕಾನೂನು ಹೋರಾಟ ಮಾಡಿದರು. ಇವುಗಳನ್ನು ದೇಶದಾದ್ಯಂತ ಜನರಿಗೆ ತಲುಪಿಸಿ ಜಾಗೃತಿ ಮೂಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರು, ರಾಮ ಮಂದಿರ ವಿಚಾರದಲ್ಲಿ ಬಿಜೆಪಿಯ ಪಾತ್ರ ಬಹು ದೊಡ್ಡದಾಗಿದೆ. ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಯಾವುದೇ ಪಾತ್ರವಿಲ್ಲ. ಹಾಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಮೂಡಿದ್ದು, ಉದ್ಘಾಟನೆಯಿಂದ ದೂರ ಉಳಿದಿದ್ದಾರೆ.

ಅಯೋಧ್ಯೆಗೆ ಬಿಡಿಗಾಸು ನೀಡುವುದಿಲ್ಲ ಎಂದ ಹೇಳಿದ್ದ ಸಿಎಂ ಸಿದ್ದರಾಯ್ಯ ಅವರು ಉದ್ಘಾಟನೆ ನಂತರ ಹೋಗುವುದಾಗಿ ಹೇಳಿದ್ದಾರೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಸಿಎಂ ಅವರು ತಮ್ಮ ಪಾಪ ತೊಳೆದುಕೊಳ್ಳಲು ತ್ಮ್ಮ ಶಿಷ್ಯರ ಜೊತೆ ಹೋಗಿ ಬರಲಿ ಎಂದು ವ್ಯಂಗ್ಯವಾಡಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ, ಯತೀಂದ್ರ ಅವರು ಸ್ಪರ್ಧಿಸಿದರೇ ಉತ್ತಮ. ನಾನು ಯಾವತ್ತು ಎದುರಾಲಿಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಪರ ಬಿಜೆಪಿ-ಜೆಡಿಎಸ್‌ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಪ್ರದೀಪ್‌ ಈಶ್ವರ್‌ ವಿಚಾರವಾಗಿ, ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ. ಹಾಗಾಗಿ ಕೊಚ್ಚೆಗೆ ಕಲ್ಲು ಹಾಕುವುದಿಲ್ಲ ಎಂದು ಹೇಳುವ ಮೂಲಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಅವರ ಆಕ್ಷೇಪಾರ್ಹ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ.

andolanait

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

1 hour ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

3 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

4 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

4 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

5 hours ago