ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಿರ್ಣಯಿಸಿದ ಬಗ್ಗೆ ಮಾತನಾಡಿದ ಅವರು, ರಾಮನಿಗಾಗಿ, ರಾಮ ಜನ್ಮಭೂಮಿಗಾಗಿ ರಥಯಾತ್ರೆಯನ್ನು ಎಲ್.ಕೆ ಅಡ್ವಾಣಿ ಅವರು ಮಾಡಿದರು. ರವಿಶಂಕರ್ ಪ್ರಸಾದ್ ಕಾನೂನು ಹೋರಾಟ ಮಾಡಿದರು. ಇವುಗಳನ್ನು ದೇಶದಾದ್ಯಂತ ಜನರಿಗೆ ತಲುಪಿಸಿ ಜಾಗೃತಿ ಮೂಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ಅವರು, ರಾಮ ಮಂದಿರ ವಿಚಾರದಲ್ಲಿ ಬಿಜೆಪಿಯ ಪಾತ್ರ ಬಹು ದೊಡ್ಡದಾಗಿದೆ. ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಯಾವುದೇ ಪಾತ್ರವಿಲ್ಲ. ಹಾಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಮೂಡಿದ್ದು, ಉದ್ಘಾಟನೆಯಿಂದ ದೂರ ಉಳಿದಿದ್ದಾರೆ.
ಅಯೋಧ್ಯೆಗೆ ಬಿಡಿಗಾಸು ನೀಡುವುದಿಲ್ಲ ಎಂದ ಹೇಳಿದ್ದ ಸಿಎಂ ಸಿದ್ದರಾಯ್ಯ ಅವರು ಉದ್ಘಾಟನೆ ನಂತರ ಹೋಗುವುದಾಗಿ ಹೇಳಿದ್ದಾರೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಸಿಎಂ ಅವರು ತಮ್ಮ ಪಾಪ ತೊಳೆದುಕೊಳ್ಳಲು ತ್ಮ್ಮ ಶಿಷ್ಯರ ಜೊತೆ ಹೋಗಿ ಬರಲಿ ಎಂದು ವ್ಯಂಗ್ಯವಾಡಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ, ಯತೀಂದ್ರ ಅವರು ಸ್ಪರ್ಧಿಸಿದರೇ ಉತ್ತಮ. ನಾನು ಯಾವತ್ತು ಎದುರಾಲಿಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಪರ ಬಿಜೆಪಿ-ಜೆಡಿಎಸ್ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಪ್ರದೀಪ್ ಈಶ್ವರ್ ವಿಚಾರವಾಗಿ, ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ. ಹಾಗಾಗಿ ಕೊಚ್ಚೆಗೆ ಕಲ್ಲು ಹಾಕುವುದಿಲ್ಲ ಎಂದು ಹೇಳುವ ಮೂಲಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಆಕ್ಷೇಪಾರ್ಹ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…