ರಾಜ್ಯ

ಕಾಂಗ್ರೆಸ್ ಒಂದೂವರೆ ವರ್ಷದಿಂದ ಎಸ್ ಐಟಿ ಭಜನೆ:‌ ಎಚ್‌ಡಿಕೆ ಲೇವಡಿ

ರಾಮನಗರ: ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.

ಇದೇ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಲ್ಲಿ ಇದ್ದಾಗ ಕೋವಿಡ್ ಖರೀದಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಇದ್ದರು. ಆಗ ಏನು ಮಾಡುತ್ತಿದ್ದರು. ಇವರು ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯಿತು. ಆಗಿನಿಂದ ಏನು ಮಾಡುತ್ತಿದ್ದರು? ತನಿಖೆ ಯಾಕೆ ಮಾಡಲಿಲ್ಲ? ಈಗ ಮೂಡಾ, ವಾಲ್ಮೀಕಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಅದಕ್ಕೆ ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರದಿಂದ ಎಸ್ ಐಟಿ ಭಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

2 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

2 hours ago

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…

2 hours ago

ರೈಲ್ವೆ ಕಂಬಿಗಳಿಗೆ ತಂತಿ ಜಾಲರಿ ಅಳವಡಿಕೆ ಪ್ರಯೋಗ ಯಶಸ್ವಿ

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…

2 hours ago

ಕ್ಯಾನ್ಸರ್ ಚಿಂತೆ ಬಿಡಿ, ಚಿಕಿತ್ಸೆ ಬಗ್ಗೆ ಗಮನ ಕೊಡಿ

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…

2 hours ago