ರಾಮನಗರ: ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.
ಇದೇ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಲ್ಲಿ ಇದ್ದಾಗ ಕೋವಿಡ್ ಖರೀದಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಇದ್ದರು. ಆಗ ಏನು ಮಾಡುತ್ತಿದ್ದರು. ಇವರು ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯಿತು. ಆಗಿನಿಂದ ಏನು ಮಾಡುತ್ತಿದ್ದರು? ತನಿಖೆ ಯಾಕೆ ಮಾಡಲಿಲ್ಲ? ಈಗ ಮೂಡಾ, ವಾಲ್ಮೀಕಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಅದಕ್ಕೆ ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರದಿಂದ ಎಸ್ ಐಟಿ ಭಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…