Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಕಾಂಗ್ರೆಸ್‌ ಆಯ್ತು ಇದೀಗ ಬಿಜೆಪಿ ಸರದಿ : ದಿಲ್ಲಿ ತಲುಪಿದ ಬಿಜೆಪಿ ಪ್ರತ್ಯೇಕ ಬಣ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ ಬಿಜೆಪಿಯ ಪ್ರತ್ಯೇಕ ಬಣವೊಂದರ ನಾಯಕರು ದೆಹಲಿಗೆ ಪ್ರಯಾಣಿಸಿದ್ದಾರೆ.

ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ.ನಾಯಕ್ ಮತ್ತು ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, ಹೈಕಮಾಂಡ್ ಜತೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕಾಲಾವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಅಗತ್ಯ ಇರುವ ವಿಷಯಗಳ ಬಗ್ಗೆ ಚರ್ಚಿಸಿ, ನಾಳೆ ಬೆಳಗ್ಗೆ ಹೆಚ್ಚಿನ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಈ ಭೇಟಿಯು ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ಸಂಘಟನಾತ್ಮಕ ವಿಷಯಗಳು, ವಿಶೇಷವಾಗಿ 2028 ರ ಚುನಾವಣೆಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾಗಲಿವೆ ಎಂದು ಅವರು ತಿಳಿಸಿದ್ದಾರೆ.

Tags:
error: Content is protected !!