ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ. ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಕೇಂದ್ರ ನಾಯಕರಾದ ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ತಂದಿದೆ. ನಾನು ಕಾಂಗ್ರೆಸ್ ಪಕ್ಷ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ನವರು ಅನ್ಯಾಯ ಮಾಡಿಲ್ಲ. ಕಾಂಗ್ರೆಸ್ ನವರು ನನಗೆ ಪಕ್ಷದಲ್ಲಿ ಸ್ಥಾನಮಾನ ನೀಡಿ ಗೌರವಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ನಾನು ಪರಿಷತ್ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂದೂ ಶೆಟ್ಟರ್ ಹೇಳಿದರು.
ದೆಹಲಿ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…