ಮಾಗಡಿ ಶಾಸಕ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ನೀಡಿದ ಹೇಳಿಕೆ ಸದ್ಯ ಕಾಂಗ್ರೆಸ್ ಹಾಗೂ ಎನ್ಡಿಎ ಕರ್ನಾಟಕ ನಾಯಕರುಗಳ ನಡುವೆ ವಾದ ವಿವಾದ ನಿರ್ಮಾಣವಾಗುವುದಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಹೇಳಿಕೆ ಕುರಿತು ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೆ ಗ್ಯಾರಂಟಿ ಯೋಜನೆ ತಳುಕುಹಾಕಿ ಮಾತನಾಡಿರುವುದು ಕಾಂಗ್ರೆಸ್ ಸರ್ಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ, ಕೊಟ್ಟ ಕೈಯಲ್ಲೇ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಪುಟವಾಗಿ ಗೋಚರಿಸುತ್ತದೆ. ಕಾಂಗ್ರೆಸ್ ಯುದ್ಧಕ್ಕೂ ಮೊದಲೇ ಸೋಲೊಪ್ಪಿಕೊಂಡಿದೆ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಕಾಂಗ್ರೆಸ್ ಸರ್ಕಾರ ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದು ಬರೆದುಕೊಂಡಿದ್ದಾರೆ.
ಬಾಲಕೃಷ್ಣ ಹೇಳಿಕೆಯನ್ನು ಬ್ಲಾಕ್ಮೇಲ್ ಎಂದಿರುವ ನಿಖಿಲ್ ಕುಮಾರಸ್ವಾಮಿ ಮತದಾರರು ಗ್ಯಾರಂಟಿ ಯೋಜನೆ ಕೊಡಿ ಮತ ಹಾಕುತ್ತೇವೆ ಎಂದು ಕೇಳಿರಲಿಲ್ಲ, ವಾಸ್ತವ ಹೀಗಿದ್ದ ಮೇಲೆ ಗ್ಯಾರಂಟಿಗಳನ್ನು ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಪಕ್ಷದ ಈ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದೂ ಸಹ ನಿಖಿಲ್ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…