ಮಾಗಡಿ ಶಾಸಕ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ನೀಡಿದ ಹೇಳಿಕೆ ಸದ್ಯ ಕಾಂಗ್ರೆಸ್ ಹಾಗೂ ಎನ್ಡಿಎ ಕರ್ನಾಟಕ ನಾಯಕರುಗಳ ನಡುವೆ ವಾದ ವಿವಾದ ನಿರ್ಮಾಣವಾಗುವುದಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಹೇಳಿಕೆ ಕುರಿತು ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಗೆ ಗ್ಯಾರಂಟಿ ಯೋಜನೆ ತಳುಕುಹಾಕಿ ಮಾತನಾಡಿರುವುದು ಕಾಂಗ್ರೆಸ್ ಸರ್ಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ, ಕೊಟ್ಟ ಕೈಯಲ್ಲೇ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಪುಟವಾಗಿ ಗೋಚರಿಸುತ್ತದೆ. ಕಾಂಗ್ರೆಸ್ ಯುದ್ಧಕ್ಕೂ ಮೊದಲೇ ಸೋಲೊಪ್ಪಿಕೊಂಡಿದೆ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಕಾಂಗ್ರೆಸ್ ಸರ್ಕಾರ ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದು ಬರೆದುಕೊಂಡಿದ್ದಾರೆ.
ಬಾಲಕೃಷ್ಣ ಹೇಳಿಕೆಯನ್ನು ಬ್ಲಾಕ್ಮೇಲ್ ಎಂದಿರುವ ನಿಖಿಲ್ ಕುಮಾರಸ್ವಾಮಿ ಮತದಾರರು ಗ್ಯಾರಂಟಿ ಯೋಜನೆ ಕೊಡಿ ಮತ ಹಾಕುತ್ತೇವೆ ಎಂದು ಕೇಳಿರಲಿಲ್ಲ, ವಾಸ್ತವ ಹೀಗಿದ್ದ ಮೇಲೆ ಗ್ಯಾರಂಟಿಗಳನ್ನು ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಪಕ್ಷದ ಈ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದೂ ಸಹ ನಿಖಿಲ್ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…