ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಗೊಂದಲವನ್ನು ಹೈಕಮಾಂಡ್‌ ಮಾಡಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಎಂದು ಹೇಳಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್‌ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತದೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

21 mins ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

30 mins ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

1 hour ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

2 hours ago

ಹಾಸನ: ವೇದಿಕೆ ಮೇಲೆಯೇ ಗಳಗಳನೆ ಕಣ್ಣೀರು ಹಾಕಿದ ಎಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…

2 hours ago