ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ.
ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಚರ್ಚೆ ಮಾಡಿದ್ದು, ಬಹಿರಂಗವಾಗಿ ಯಾರು ಕೂಡ ಹೇಳಿಕೆಗಳನ್ನ ನೀಡದಂತೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿ , ನಾಯಕರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ. ಸೂಕ್ತ ಸಮಯದಲ್ಲಿ ನಿರ್ಧಾರವನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಹಿನ್ನಡೆಯಾಗಿದೆ. ಹಳೆ ಮೈಸೂರು ಭಾಗದಲ್ಲಿ ನಾವು ನಾಲ್ಕು ಸ್ಥಾನ ಗೆಲ್ಲಬಹುದಿತ್ತು ಅಲ್ವಾ ಎಂದು ಸಿದ್ದು ಗಮನಕ್ಕೆ ತಂದಿದ್ದಾರೆ. ಇನ್ನು ಹೆಚ್ಚುವರಿ ಡಿಸಿಎಂ ಗೆ ನಾಯಕರು ಆಗ್ರಹಿಸುತ್ತಿರುವುದರಿಂದ ನಾಯಕರನ್ನು ಸಮಾಧಾನ ಪಡಿಸಲು ಹೈಕಮಾಂಡ್ ತಂತ್ರಗಾರಿಗೆ ಮಾಡುತ್ತಿದ್ದು, ಒನ್ ಮ್ಯಾನ್ ಒನ್ ಪೋಸ್ಟ್ ಪಾಲಿಸಿ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ತಿಂಗಳ ವೇಳೆಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನ ನೇಮಕ ಮಾಡುವ ಸಾಧ್ಯತೆ ಇದೆ. ಈ ಮೂಲಕ ಅಸಮಾಧಾನಿತರನ್ನ ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ.
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ…
ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್…