ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ.
ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಚರ್ಚೆ ಮಾಡಿದ್ದು, ಬಹಿರಂಗವಾಗಿ ಯಾರು ಕೂಡ ಹೇಳಿಕೆಗಳನ್ನ ನೀಡದಂತೆ ಸಚಿವರಿಗೆ ಹಾಗೂ ಶಾಸಕರಿಗೆ ಸೂಚನೆ ನೀಡಿ , ನಾಯಕರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ. ಸೂಕ್ತ ಸಮಯದಲ್ಲಿ ನಿರ್ಧಾರವನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಹಿನ್ನಡೆಯಾಗಿದೆ. ಹಳೆ ಮೈಸೂರು ಭಾಗದಲ್ಲಿ ನಾವು ನಾಲ್ಕು ಸ್ಥಾನ ಗೆಲ್ಲಬಹುದಿತ್ತು ಅಲ್ವಾ ಎಂದು ಸಿದ್ದು ಗಮನಕ್ಕೆ ತಂದಿದ್ದಾರೆ. ಇನ್ನು ಹೆಚ್ಚುವರಿ ಡಿಸಿಎಂ ಗೆ ನಾಯಕರು ಆಗ್ರಹಿಸುತ್ತಿರುವುದರಿಂದ ನಾಯಕರನ್ನು ಸಮಾಧಾನ ಪಡಿಸಲು ಹೈಕಮಾಂಡ್ ತಂತ್ರಗಾರಿಗೆ ಮಾಡುತ್ತಿದ್ದು, ಒನ್ ಮ್ಯಾನ್ ಒನ್ ಪೋಸ್ಟ್ ಪಾಲಿಸಿ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ತಿಂಗಳ ವೇಳೆಗೆ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನ ನೇಮಕ ಮಾಡುವ ಸಾಧ್ಯತೆ ಇದೆ. ಈ ಮೂಲಕ ಅಸಮಾಧಾನಿತರನ್ನ ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…