Training program for KAS Taluk Nodal Officers inaugurated by siddaramaiah
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದು ಶುಭ ಕೋರಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿದೆ. ಶಾಮನೂರು ಶಿವಶಂಕರಪ್ಪ ನವರು ಮಂತ್ರಿ, ಸಂಸದರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜನಮನದಲ್ಲಿ ನೆಲೆಸಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕರಾಗಿದ್ದವರು ಮೃತರಾದರೆ, ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಪ್ರತೀತಿಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ. ಆದ್ದರಿಂದ ಸಮರ್ಥ ಶಾಮನೂರು ರವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಅವರು ನಾಮಪತ್ರ ಸಲ್ಲಿಕೆಯಲ್ಲಿ ಇತರರೊಂದಿಗೆ ಭಾಗಿಯಾಗಿದ್ದೇನೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1: ಕಾಂಗ್ರೆಸ್ ವಿವಿಧ ಜಾತಿಧರ್ಮ ವರ್ಗಗಳ ಎಲ್ಲರನ್ನೊಳಗೊಂಡ ಪಕ್ಷ. ಮಹಿಳೆಯರು, ರೈತರು, ಹಿಂದು, ಅಲ್ಪಸಂಖ್ಯಾತರು, ಕಾರ್ಮಿಕರ ಒಳಗೊಂಡ ಪಕ್ಷವಾಗಿದ್ದು, ಎಲ್ಲರನ್ನೊಳಗೊಂಡಿರುವ ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟಿರುವ ಪಕ್ಷ. ನುಡಿದಂತೆ ನಡೆದು, ಜನರಿಗೆ ನೀಡಲಾದ ಭರವಸೆಗಳನ್ನು ಈಡೇರಿಸಿರುವ ಪಕ್ಷ. ಕಳೆದ ಬಾರಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಮೂರು ವರ್ಷಗಳಲ್ಲಿ ಭಾಗಶ: ಪೂರೈಸಲಾಗಿದೆ. ಬಜೆಟ್ ನ್ನು ಅವಲೋಕಿಸಿದರೆ ನುಡಿದಂತೆ ನಡೆಯುವ ನಮ್ಮ ಮಾತನ್ನು ನಿರೂಪಿಸಲಾಗಿದೆ., ದಾವಣಗೆರೆ ಜಿಲ್ಲೆಯು ಗ್ಯಾರಂಟಿಗಳ ಜಾರಿಯಲ್ಲಿ ನಂ.1 ಆಗಿದೆ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…