ರಾಜ್ಯ

ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮತನಾಡಿದರು.

ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರಕನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕರೆ ನೀಡಿದರು.

ಜೆಡಿಎಸ್ -ಬಿಜೆಪಿ ಮೈತ್ರಿ ಐತಿಹಾಸಿಕ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೆಗೌಡರ ನೇತೃತ್ವದಲ್ಲಿ ಆಗಿರುವ ಈ ಮೈತ್ರಿಯನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುತ್ತದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

37 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

1 hour ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

3 hours ago