ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮತನಾಡಿದರು.
ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರಕನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕರೆ ನೀಡಿದರು.
ಜೆಡಿಎಸ್ -ಬಿಜೆಪಿ ಮೈತ್ರಿ ಐತಿಹಾಸಿಕ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೆಗೌಡರ ನೇತೃತ್ವದಲ್ಲಿ ಆಗಿರುವ ಈ ಮೈತ್ರಿಯನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುತ್ತದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…